ADVERTISEMENT

ಗ್ರಂಥ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2013, 19:55 IST
Last Updated 3 ಮಾರ್ಚ್ 2013, 19:55 IST

ಬೆಂಗಳೂರು: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಪ್ರಸ್ತುತ 2012 ನೇ ಸಾಲಿನ `ಪ್ರೊ. ಎಂ.ಹಿರಿಯಣ್ಣ ಗ್ರಂಥ ಪುರಸ್ಕಾರ' ಕ್ಕೆ ಪುಸ್ತಕಗಳನ್ನು ಆಹ್ವಾನಿಸಿದೆ.

ಕಾದಂಬರಿ, ಕಥಾ ಸಾಹಿತ್ಯ, ಗದ್ಯ, ಪದ್ಯ, ಕಾವ್ಯ ಸಾಹಿತ್ಯ, ನಾಟಕ ಸಾಹಿತ್ಯ, ಗ್ರಂಥ ಸಂಪಾದನ ಸಾಹಿತ್ಯ, ಶಾಸ್ತ್ರ ಸಾಹಿತ್ಯ, ಪ್ರಬಂಧ ಸಾಹಿತ್ಯ ಹೀಗೆ ಇನ್ನೂ ಅನೇಕ ಸಾಹಿತ್ಯಕ್ಕೆ ಸಂಬಂಧಿಸಿದ 2010 ರಿಂದ 2012 ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ಪುರಸ್ಕಾರಕ್ಕೆ ಸಲ್ಲಿಸಬಹುದು.

ಪುರಸ್ಕಾರವು ಹತ್ತು ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮಾರ್ಚ್ 20 ರೊಳಗೆ ಕಳುಹಿಸುವಂತೆ ಪ್ರಕಟಣೆಯು ತಿಳಿಸಿದೆ. ವಿವಿಯ ವೆಬ್‌ಸೈಟ್ ಡಿಡಿಡಿ.ಠ್ಠ.ಚ್ಚ.ಜ್ಞಿ ನಲ್ಲಿ ಸಂಪೂರ್ಣ ವಿವರ ಲಭ್ಯವಿದೆ.

ವಿವರಗಳಿಗೆ ಸಂಪರ್ಕಿಸಿ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ. ದೂರವಾಣಿ ಸಂಖ್ಯೆ- 2670 1303.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.