ಬೆಂಗಳೂರು: ವರ್ತೂರಿನ ವಿಬ್ಗಯಾರ್ ಶಾಲೆಯ ಆವರಣದಲ್ಲಿ ಭಾನುವಾರ ಕಾಣಿಸಿಕೊಂಡ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಶಾಲೆಯ ಆವರಣಕ್ಕೆ ಚಿರತೆ ನುಗ್ಗಿದೆ ಎಂದು ಸೆಕ್ಯುರಿಟಿ ಗಾರ್ಡ್ ಪೊಲೀಸರಿಗೆ ಸುದ್ದಿ ತಿಳಿಸಿದ್ದರು. ಪೊಲೀಸರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
ಅರಣ್ಯ ಇಲಾಖೆ ಸಿಬ್ಬಂದಿ ಶಾಲೆಗೆ ಬಂದು ಪರಿಶೀಲನೆ ನಡೆಸಿದರು. ಶಾಲಾ ಆವರಣದಲ್ಲಿ ಚಿರತೆ ಇರುವ ವಿಷಯ ಖಚಿತಪಡಿಸಿಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಚಿರತೆ ಓಡಾಡಿರುವ ದೃಶ್ಯ ಶಾಲಾ ಆವರಣದಲ್ಲಿ ಅಳವಡಿಸಲಾಗಿರುವ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಶಾಲೆಯ ಸಿಬ್ಬಂದಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.