ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗದ ಪ್ರಾಧ್ಯಾಪಕ ಡಾ. ವಿ.ನಾಗೇಶ್ ಬೆಟ್ಟಕೋಟೆ ಅವರಿಗೆ ಜೀವಮಾನ ಸಾಧಕ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕೇಂದ್ರ ಸಂಸ್ಕೃತಿ ಸಚಿವಾಲಯದ ಉನ್ನತ ಸಮಿತಿ ಸದಸ್ಯ ಟಿ.ವಿ.ರಂಗಯ್ಯ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶದ ರಂಗಭೂಮಿ ದಿಗ್ಗಜರು, ಪತ್ರಿಕಾ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು.
ಕೇಂದ್ರ ಸಂಸ್ಕೃತಿ ಸಚಿವಾಲಯ, ಆಂಧ್ರಪ್ರದೇಶ ಸಂಸ್ಕೃತಿ ಸಚಿವಾಲಯ ಮತ್ತು ಆಂಧ್ರ ವಿಶ್ವವಿದ್ಯಾಲಯ ಹಾಗೂ ರಸಜ್ಞ ಜಂಟಿಯಾಗಿ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ 2ನೇ ರಾಷ್ಟ್ರೀಯ ನಾಟಕೋತ್ಸವದಲ್ಲಿ ಆಂಧ್ರ ವಿ.ವಿ ಕುಲಪತಿ ಪ್ರೊ. ಜಿ.ನಾಗೇಶ್ವರ ರಾವ್ ಮತ್ತು ಆಂಧ್ರ ತೆರಿಗೆ ಪ್ರಧಾನ ಆಯುಕ್ತ ಬಿ.ಜಿ.ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.