ಬೆಂಗಳೂರು: ಟಿ.ಜಾನ್ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನದ ‘ತರಂಗ’ ಅಂತರ ಕಾಲೇಜು ಉತ್ಸವ ನಡೆಯಿತು.
ಗಾಯನ, ನೃತ್ಯ, ಫ್ಯಾಷನ್ ಶೋ, ಕ್ರೀಡೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಹಲವು ಕಾಲೇಜುಗಳಿಂದ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಪಾಲ್ಗೊಂಡು, ಪ್ರತಿಭೆ ಪ್ರದರ್ಶಿಸಿದರು. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ನಟ ನಿನಾಸಂ ಸತೀಶ್, ನಟಿ ಸಿಂಧೂ ಲೋಕನಾಥ್, ಆರ್ಜೆ ಸೌಜನ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ‘ಜನರು ತಮ್ಮ ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆ ಬಳಕೆ ಕಡಿಮೆ ಮಾಡುತ್ತಿದ್ದಾರೆ. ಅದರಲ್ಲೂ ರಾಜಧಾನಿಯಲ್ಲಿ ಕನ್ನಡ ಬಳಕೆ ದಿನೇ ದಿನೇ ಕ್ಷೀಣಿಸುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.
ಸಿಂಚನ್ ದೀಕ್ಷಿತ್ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಮೆರುಗು ನೀಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.