ADVERTISEMENT

ತಾಲ್ಲೂಕುಮಟ್ಟದ ವಸ್ತು ಪ್ರದರ್ಶನ, ಮಾರಾಟ ಮೇಳ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2015, 20:04 IST
Last Updated 28 ಮಾರ್ಚ್ 2015, 20:04 IST

ಬೆಂಗಳೂರು:  ಮಹಿಳೆಯರ ಆರ್ಥಿಕ ಸ್ವಾತಂತ್ರವು ದೇಶದ ತಲಾ ಆದಾಯ ವೃದ್ಧಿಗೆ  ಸಹಕಾರಿಯಾಗಿದೆ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರು ತಿಳಿಸಿದರು.

  ಪಟ್ಟಣದ ಶ್ರೀನಿವಾಸ ಸಮುದಾಯ ಭವನದಲ್ಲಿ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಹಣಕಾಸು ವಿಷಯಗಳಲ್ಲಿ ಅವರಿಗೂ ಸ್ವಾತಂತ್ರ್ಯ ನೀಡಬೇಕು ಎಂದರು.

  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಹೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು.   ಪುರಸಭೆ ಅಧ್ಯಕ್ಷ ಎಂ.ನಾರಾಯಣ್‌, ಮಾಜಿ ಅಧ್ಯಕ್ಷ ಉಮಾಶಂಕರ್‌, ಜ್ಞಾನ ಭಾರತಿ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ರಂಗನಾಥ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.