ADVERTISEMENT

ದಲಿತರ ಮೇಲೆ ಹಲ್ಲೆ: ಬಿಎಸ್‌ಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2016, 19:49 IST
Last Updated 26 ಜುಲೈ 2016, 19:49 IST
ದಲಿತರ ಮೇಲೆ ಹಲ್ಲೆ: ಬಿಎಸ್‌ಪಿ ಪ್ರತಿಭಟನೆ
ದಲಿತರ ಮೇಲೆ ಹಲ್ಲೆ: ಬಿಎಸ್‌ಪಿ ಪ್ರತಿಭಟನೆ   

ನೆಲಮಂಗಲ: ಗುಜರಾತ್‌ನಲ್ಲಿ ನಡೆದ ದಲಿತರ ಮೇಲಿನ ಹಲ್ಲೆ ಹಾಗೂ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಎಸ್‌ಪಿ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಎದುರು  ಜಮಾಯಿಸಿದ್ದ ಪ್ರತಿಭಟನಾಕಾರರು, ಬಿಜೆಪಿ ಮುಖಂಡ ದಯಾಶಂಕರ್‌ ಸಿಂಗ್‌ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ನಂದಗೌಡ ಪಿ.ವೆಂಕಟೇಶ್‌ ಮಾತನಾಡಿ, ‘ಬಿಜೆಪಿ ಮುಖಂಡ ದಯಾಶಂಕರ್‌ ಸಿಂಗ್‌ ಅವರು ಮಾಯಾವತಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಇಡೀ ದಲಿತ ಸಮುದಾಯಕ್ಕೆ ಅವಮಾನವಾಗಿದೆ. ಕೂಡಲೇ ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.