ADVERTISEMENT

ದಸಂಸ ಶಾಖೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2017, 19:21 IST
Last Updated 17 ಫೆಬ್ರುವರಿ 2017, 19:21 IST
ದಸಂಸ ಶಾಖೆ ಉದ್ಘಾಟನೆ
ದಸಂಸ ಶಾಖೆ ಉದ್ಘಾಟನೆ   
ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಿಲ್ಲಮಾರನಹಳ್ಳಿ ಭೀಮ್‌ಜಿ ಬಡಾವಣೆಯಲ್ಲಿ ದಲಿತ ಸಂಘರ್ಷ ಸಮಿತಿಯ  (ಸಮತಾವಾದ) ಶಾಖೆಯನ್ನು ಉದ್ಘಾಟಿಸಲಾಯಿತು.
 
ಬಳಿಕ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಮಾರಪ್ಪ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಸಂವಿಧಾನದ ಆಶಯಗಳನ್ನು ಸರ್ಕಾರಗಳು ಯಥಾವತ್ತಾಗಿ ಜಾರಿಗೆ ತಂದಿದ್ದರೆ ಇಂದು ಯಾವುದೇ ಹೋರಾಟಗಳ ಅವಶ್ಯಕತೆ ಇರುತ್ತಿರಲಿಲ್ಲ’ ಎಂದರು.
 
‘ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪೋಷಕರು ಪ್ರಯತ್ನಿಸಬೇಕು. ಶಿಕ್ಷಣ ಪಡೆದರೆ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.