ನಾಲ್ಕು ದಿನಗಳ ಹಿಂದೆ ಹೆಬ್ಬಾಳದ ಕೆಂಪಾಪುರ ಜಂಕ್ಷನ್ನ ಸಿಗ್ನಲ್ನಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ನೀರಿನ ಟ್ಯಾಂಕರ್ವೊಂದು ನಿರ್ದಯವಾಗಿ ಹರಿದ ಘಟನೆ ನಗರದ ಜನರನ್ನು ಬೆಚ್ಚಿಬೀಳಿಸಿತ್ತು. ಸದಾ ವಾಹನಗಳಿಂದ ಗಿಜಿಗುಡುವ ಈ ಜಂಕ್ಷನ್ನಲ್ಲಿ ಸ್ಕೈವಾಕ್ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಇಟ್ಟು ಪ್ರತಿಭಟನೆಯನ್ನೂ ಮಾಡಲಾಯಿತು. ಈಗಾಗಲೇ ನಿರ್ಮಾಣ ಮಾಡಲಾಗಿರುವ ಸ್ಕೈವಾಕ್ಗಳ ಸ್ಥಿತಿ ಹೇಗಿದೆ ಎಂಬುದನ್ನು ತಿಳಿಯಲು ‘ಪ್ರಜಾವಾಣಿ’ ನಗರ ಸಂಚಾರ ನಡೆಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.