ಬೆಂಗಳೂರು: ಸಿಂಧಿ ಸೇವಾ ಸಮಿತಿ ವತಿಯಿಂದ ಹೆಬ್ಬಾಳ ಕೆಂಪಾಪುರದ ಸಿಂಧಿ ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಎಂಟು ದಿನಗಳ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ದುರ್ಗಾ ದೇವಿಗೆ ವಿವಿಧ ಪೂಜೆ, ಹೋಮ ಹಾಗೂ ಆರತಿ ನೆರವೇರಿಸಲಾಯಿತು.
‘ನವರಾತ್ರಿ ಉತ್ಸವ ಪ್ರಮುಖ ಹಬ್ಬವಾಗಿದೆ. ದಾಂಡಿಯಾ ಸಾಂಪ್ರದಾಯಿಕ ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಮಿತಿಯ ಅಧ್ಯಕ್ಷ ಆರ್.ದೀಪಕ್ ನಾರಂಗ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.