ಬೆಂಗಳೂರು: ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರು ಬುಧವಾರ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಗೆ ಭೇಟಿ ನೀಡಿ ಆಸ್ಪತ್ರೆಯನ್ನು ವೀಕ್ಷಿಸಿದರು.
ಜಾರ್ಖಂಡ್ ರಾಜ್ಯ ಸರ್ಕಾರ ನಗರದಲ್ಲಿ ಆಯೋಜಿಸಿದ್ದ ಹೂಡಿಕೆದಾರರ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ನಾರಾಯಣ ಹೆಲ್ತ್ ಸಿಟಿಯ ಮುಖ್ಯಸ್ಥ ಡಾ.ದೇವಿಶೆಟ್ಟಿ ಭಾಗವಹಿಸಿದ್ದರು. ಈ ವೇಳೆ ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡುವಂತೆ ದೇವಿ ಶೆಟ್ಟಿ ಅವರು ರಘುವರ್ ದಾಸ್ ಅವರಿಗೆ ಮನವಿ ಮಾಡಿದ್ದರು.
ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡಿದ ರಘುವರ್ ದಾಸ್ ಅವರು, 15 ನಿಮಿಷ ಆಸ್ಪತ್ರೆಯನ್ನು ವೀಕ್ಷಿಸಿದರು. ದೇವಿಶೆಟ್ಟಿ ಅವರು ಆಸ್ಪತ್ರೆಯ ಬಗ್ಗೆ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.