ಬೆಂಗಳೂರು: ರಾಷ್ಟ್ರೀಯ ಬಸವ ಪುರಸ್ಕಾರ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಒಟ್ಟು 12 ಪ್ರಶಸ್ತಿಗಳನ್ನು ಇದೇ 23ರಂದು ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದರು.
23ರಂದು ಸಂಜೆ 6ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬುಧವಾರ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಆರ್.ವಿ.ದೇವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಪಂಪ ಪ್ರಶಸ್ತಿ ಪುರಸ್ಕೃತರಾದ ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರು ಬೆಂಗಳೂರಿಗೆ ಬರಲು ಆಗುವುದಿಲ್ಲ. ಹೀಗಾಗಿ ಅವರ ಮನೆಯಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಮಾತುಕತೆ: ತೊಗಲು ಬೊಂಬೆಯಾಟವನ್ನು ಯಕ್ಷಗಾನ ಬಯಲಾಟ ಅಕಾಡೆಮಿ ವ್ಯಾಪ್ತಿಗೆ ಸೇರಿಸುವ ವಿಚಾರದಲ್ಲಿ ಅಧ್ಯಕ್ಷ, ಸದಸ್ಯರ ನಡುವೆ ನಡೆದಿರುವ ವಾಗ್ವಾದ ವಿಚಾರ ಪತ್ರಿಕೆ ಮೂಲಕ ಗೊತ್ತಾಗಿದೆ. ಇಲಾಖೆಯ ನಿರ್ದೇಶಕರು ಅಧ್ಯಕ್ಷರೊಂದಿಗೆ ಮಾತನಾಡಿ ಈ ವಿಷಯವನ್ನು ಬಗೆಹರಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.