ADVERTISEMENT

ನ್ಯಾಯಾಲಯ ಕಟ್ಟಡ ಉದ್ಘಾಟನೆ: ಸಂಸದ ಗೈರು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2017, 19:43 IST
Last Updated 16 ಡಿಸೆಂಬರ್ 2017, 19:43 IST

ಪಾಂಡವಪುರ: ಪಟ್ಟಣದಲ್ಲಿ ಶನಿವಾರ ನಡೆದ ನ್ಯಾಯಾಲಯ ಸಂಕೀರ್ಣ ಉದ್ಫಾಟನಾ ಸಮಾರಂಭಕ್ಕೆ ಸಂಸದ ಸಿ.ಎಸ್. ಪುಟ್ಟರಾಜು ಗೈರು ಹಾಜರಾದರು.

‘ಮುಡಾ’ ಹಗರಣ ಹಾಗೂ ಇನ್ನಿತರ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಸಂಸದ ಸಿ.ಎಸ್.ಪುಟ್ಟರಾಜು ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಾರದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿಗೆ ಮಂಡ್ಯದ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಆರ್.ರವೀಂದ್ರ ಮತ್ತು ವಕೀಲ ಸುಂಡಹಳ್ಳಿ ಮಂಜುನಾಥ್‌ ಅವರು ಪತ್ರ ಬರೆದು ಮನವಿ ಮಾಡಿದ್ದರು.

‘ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಸಮಾರಂಭಕ್ಕೆ ಬರಲಾಗಲಿಲ್ಲ’ ಎಂದು ಪುಟ್ಟರಾಜು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.