ADVERTISEMENT

ಪಾರ್ವತಮ್ಮ ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌

​ಪ್ರಜಾವಾಣಿ ವಾರ್ತೆ
Published 28 ಮೇ 2015, 19:41 IST
Last Updated 28 ಮೇ 2015, 19:41 IST

ಬೆಂಗಳೂರು: ನಿರ್ಮಾಪಕಿ ಪಾರ್ವತಮ್ಮ ರಾಜ್‌ ಕುಮಾರ್‌, ವಿಶ್ರಾಂತ ಕುಲಪತಿ ಜಿ.ಕೆ. ನಾರಾಯಣ ರೆಡ್ಡಿ ಹಾಗೂ ಎಂಜಿನಿಯರ್‌ ಚಿನ್ನಸ್ವಾಮಿ ಮಾಂಬಳಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 2015ನೇ ಸಾಲಿನ ಗೌರವ ಡಾಕ್ಟರೇಟ್‌ ನೀಡಲು ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

ವಿವಿ ರಚಿಸಿದ್ದ ಆಯ್ಕೆ ಸಮಿತಿ ಆರು ಮಂದಿಗೆ ಗೌರವ ಡಾಕ್ಟರೇಟ್‌ ನೀಡಲು ಶಿಫಾರಸು ಮಾಡಿತ್ತು. ರಾಜ್ಯಪಾಲರು ಮೂವರ ಹೆಸರು ಅಂತಿಮಗೊಳಿಸಿ ಸಹಿ ಹಾಕಿದ್ದಾರೆ. ಮೇ 30ರಂದು ನಡೆಯುವ 50ನೇ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ವಿವಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.