ADVERTISEMENT

ಪ್ರಭಾಕರ ರೆಡ್ಡಿ ಕಾಂಗ್ರೆಸ್‌ಗೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2014, 20:09 IST
Last Updated 15 ಸೆಪ್ಟೆಂಬರ್ 2014, 20:09 IST

ಬೆಂಗಳೂರು: ಲೋಕಸಭಾ ಚುನಾವಣೆ­ಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಪ್ರಭಾಕರ ರೆಡ್ಡಿ ಅವರು ಸೋಮವಾರ ಆ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದರು.

ಪ್ರಭಾಕರ ರೆಡ್ಡಿ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ಸಹೋ­ದರ, ಹಾಲಿ ಸಂಸದ ಡಿ.ಕೆ.ಸುರೇಶ್‌ ಅವರ ವಿರುದ್ಧ ಲೋಕ­ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್‌ ಅವರ ಉಪಸ್ಥಿತಿಯಲ್ಲೇ ಜೆಡಿಎಸ್‌ಗೆ ವಿದಾಯ ಹೇಳಿ ಕಾಂಗ್ರೆಸ್ ಪ್ರವೇಶಿಸಿದರು.

‘ರಾಜಕೀಯದಲ್ಲಿ ಯಾವಾಗಲೂ ವಿರೋಧ ಪಕ್ಷ ಮತ್ತು ಪ್ರತಿಸ್ಪರ್ಧಿಗಳು ಇರುತ್ತಾರೆ. ನಮ್ಮ ಕ್ಷೇತ್ರಗಳಲ್ಲಿ ಉತ್ತಮ ಸ್ಪರ್ಧೆಗಾಗಿ ವಿರೋಧಿಗಳೂ ಬೇಕಾಗುತ್ತಾರೆ’ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.