ADVERTISEMENT

ಬಸವೇಶ್ವರ ಪ್ರತಿಮೆ ಅನಾವರಣ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2018, 20:38 IST
Last Updated 4 ಮಾರ್ಚ್ 2018, 20:38 IST
ಬಸವೇಶ್ವರ ಪ್ರತಿಮೆ ಅನಾವರಣ
ಬಸವೇಶ್ವರ ಪ್ರತಿಮೆ ಅನಾವರಣ   

ಹೊಸಕೋಟೆ: ಪಟ್ಟಣದ ತಾಲ್ಲೂಕು ಕಚೇರಿ ಎದುರು ನಿರ್ಮಿಸಿರುವ 16 ಅಡಿ ಎತ್ತರದ ಅಶ್ವಾರೂಢ ಬಸವೇಶ್ವರ ಕಂಚಿನ ಪ್ರತಿಮೆಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.

ವೀರಶೈವ ಲಿಂಗಾಯತ ಸಮಾಜ ಮತ್ತು ಪ್ರತಿಮೆ ನಿರ್ಮಾಣ ಸಮಿತಿಯ ಸದಸ್ಯರು ದಾನಿಗಳ ನೆರವಿನಿಂದ ಇದನ್ನು ಸ್ಥಾಪಿಸಿದ್ದಾರೆ.

‘ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕಾರಿ. ವಿಶ್ವ ಬಸವ ಪ್ರತಿಷ್ಠಾನವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ’ ಎಂದು ಬೆಂಗಳೂರಿನ ಬೇಲಿ ಮಠದ ಶಿವರುದ್ರ ಸ್ವಾಮೀಜಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.