ಹೊಸಕೋಟೆ: ಬಾಲಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆವಲಹಳ್ಳಿ ಪೊಲೀಸರು ಮೂವರು ಯುವಕರನ್ನು ಗುರುವಾರ ಬಂಧಿಸಿದ್ದಾರೆ.
ಯಲಹಂಕ ಬಳಿಯ ಅಮೃತಹಳ್ಳಿಯ ಶ್ರೀನಿವಾಸ (19), ಶಂಕರ (18) ಹಾಗೂ ಆದರ್ಶ (18) ಬಂಧಿತರು. ಅಮೃತಹಳ್ಳಿಯ ಬಾಲಕಿ 10ನೇ ತರಗತಿ ಓದುತ್ತಿದ್ದಾಳೆ. ಬಾಲಕಿ ಡಿ.15 ರಂದು ಆವಲಹಳ್ಳಿಯಲ್ಲಿನ ಚಿಕ್ಕಪ್ಪನ ಮನೆಗೆ ಬಂದಿದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿದ್ದರು.
ಬಾಲಕಿಯ ತಂದೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮುಳುಬಾಗಿಲು ಸಮೀಪದ ಬೂದಳಪಲ್ಲಿಯಲ್ಲಿ ಆರೋಪಿಗಳನ್ನು ಬಂಧಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.