ADVERTISEMENT

ಬಿಜೆಪಿ ಪ್ರಚಾರಕ್ಕೆ ರಥ: ಅಶೋಕ್‌

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2015, 20:14 IST
Last Updated 3 ಆಗಸ್ಟ್ 2015, 20:14 IST

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿಯು ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲೂ ರಥಗಳನ್ನು ಬಳಸಲಿದೆ.

ಪಕ್ಷದ ಕಚೇರಿಯಲ್ಲಿ ಸೋಮವಾರ ಮಾತನಾಡಿದ ಶಾಸಕ, ಚುನಾವಣಾ ಉಸ್ತುವಾರಿ ಆರ್‌. ಅಶೋಕ್‌, ಇದೇ 13, 14ರಂದು ಈ ರಥಗಳನ್ನು ಬಿಡುಗಡೆ ಮಾಡಲಾಗುವುದು. ಡಿಜಿಟಲ್‌ ತಂತ್ರಜ್ಞಾನ ಅಳವಡಿಸಿರುವ ಈ ರಥಗಳು ಎಲ್ಲ ವಿಧಾನಸಭಾ ಕ್ಷೇತ್ರಗಳ ವಾರ್ಡ್‌ಗಳಲ್ಲಿ ಸಂಚರಿಸಲಿವೆ ಎಂದರು.

‘ಬಿಬಿಎಂಪಿಯನ್ನು ವಿಭಜಿಸುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತೆಗೆದುಕೊಂಡಿದ್ದು, ಚುನಾವಣೆಯಲ್ಲಿ ಇದು ಸಿದ್ದರಾಮಯ್ಯ ಅವರಿಗೆ ಶಾಪವಾಗಲಿದೆ. ಬೆಂಗಳೂರು ಜನ ಸೂಕ್ತ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.

ಬಿಜೆಪಿಗೆ ಸೇರ್ಪಡೆ: ಬಿಬಿಎಂಪಿ ಮಾಜಿ ಸದಸ್ಯೆ ಕಾಂಗ್ರೆಸ್‌ನ ಎ. ಪೂರ್ಣಿಮಾ,  ಅವರ ಪತಿ ಶ್ರೀನಿವಾಸ್ ಹಾಗೂ ರಾಜ್ಯ ಯಾದವ ಸಮಾಜದ ಹಲವು ಮುಖಂಡರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡರು. ಪೂರ್ಣಿಮಾ ಅವರು ಜೆಡಿಎಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎ. ಕೃಷ್ಣಪ್ಪ ಅವರ ಮಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.