ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಕಳೆ ತೆಗೆಯುವ ಕಾರ್ಯ ಮುಂದುವರಿದಿದೆ.
ಮಂಗಳವಾರ ಜೆಸಿಬಿ ಜತೆಗೆ ಹಿಟಾಚಿ ಯಂತ್ರವನ್ನು ಬಳಸಿಕೊಳ್ಳಲಾಯಿತು.
ಕೆರೆಯ ಅಂಗಳದಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡಲು ಕೆರೆ ಕೋಡಿ ಪ್ರದೇಶದಲ್ಲಿ ಎರಡು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮತ್ತಷ್ಟು ಸಿ.ಸಿ.ಟಿ.ವಿ ಕ್ಯಾಮೆರಾಗಳು ಬರಲಿವೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
‘ಅರಿವು’ ಯೋಜನೆಗೆ ₹ 100 ಕೋಟಿ ಮೀಸಲು
ಬೆಂಗಳೂರು: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷಣ ಸಾಲದ ‘ಅರಿವು’ ಯೋಜನೆಗೆ ಈ ಸಾಲಿನಲ್ಲಿ ₹ 100 ಕೋಟಿ ಮೀಸಲಿಡಲಾಗಿದೆ ಎಂದು ಶಿಕ್ಷಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಹೇಳಿದರು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮಂಗಳವಾರ ಏರ್ಪಡಿಸಿದ್ದ ‘ಅರಿವು’ ಹೊಸ ತಂತ್ರಾಂಶ ಚಾಲನೆ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.