ADVERTISEMENT

ಬೈಕ್‌ಗೆ ಕ್ಯಾಂಟರ್‌ ಡಿಕ್ಕಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:38 IST
Last Updated 22 ಮಾರ್ಚ್ 2018, 20:38 IST

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕು ನಿಡವಂದ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 298ರಲ್ಲಿ ಗುರುವಾರ ಬೈಕ್‌ಗೆ ಕ್ಯಾಂಟರ್‌ ಗುದ್ದಿದ ಪರಿಣಾಮ ದಾಬಸ್‌ಪೇಟೆಯ ಜಗದೀಶ್ ಮತ್ತು ಹೊನ್ನೇನಹಳ್ಳಿ ತಾಂಡ್ಯದ ಸೀನಾ ನಾಯಕ ಎಂಬುವವರು ಮೃತಪಟ್ಟಿದ್ದಾರೆ.

ಇಬ್ಬರೂ ತ್ಯಾಮಗೊಂಡ್ಲು ಕಡೆಯಿಂದ ಕೈಗಾರಿಕಾ ಪ್ರದೇಶದ ರಸ್ತೆ ಮೂಲಕ ದಾಬಸ್‌ಪೇಟೆ ಕಡೆಗೆ ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಗೆ ತಿರುವು ಪಡೆಯುವ ವೇಳೆ ದೊಡ್ಡಬಳ್ಳಾಪುರ ಕಡೆಯಿಂದ ಬರುತ್ತಿದ್ದ ಕ್ಯಾಂಟರ್‌ ಗುದ್ದಿದೆ. ಚಾಲಕ ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.