ADVERTISEMENT

ಬೈಕ್ ಗುದ್ದಿ ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2017, 19:55 IST
Last Updated 23 ಆಗಸ್ಟ್ 2017, 19:55 IST

ಬೆಂಗಳೂರು: ಯಲಹಂಕ ಸಮೀಪದ ವೆಂಕಟಾಲ ಬಳಿ ಮಂಗಳವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮುನಿಕೃಷ್ಣ (75) ಎಂಬುವರು ಮೃತಪಟ್ಟಿದ್ದಾರೆ.

ವೆಂಕಟಾಲ ನಿವಾಸಿಯಾದ ಮುನಿಕೃಷ್ಣ, ಕೂಲಿ ಕೆಲಸ ಮಾಡುತ್ತಿದ್ದರು. ರಾತ್ರಿ 8.30ರ ಸುಮಾರಿಗೆ ಅವರು ಅಂಗಡಿಗೆ ಹೋಗಲು ರಸ್ತೆ ದಾಟುತ್ತಿದ್ದಾಗ, ಯಲಹಂಕ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಮುನಿಕೃಷ್ಣ ಹಾಗೂ ಬೈಕ್ ಸವಾರ ಇಬ್ಬರೂ ಗಾಯಗೊಂಡರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮುನಿಕೃಷ್ಣ ಮೃತಪಟ್ಟಿದ್ದು, ಬೈಕ್ ಸವಾರ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಯಲಹಂಕ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ: ವಿಜಯನಗರ ಸಮೀಪದ ಸರಸ್ವತಿನಗರದಲ್ಲಿ ವ್ಯಾಪಾರಿ ಜಯಂತ್ (25) ನೇಣು ಹಾಕಿಕೊಂಡು ಮಂಗಳವಾರ ರಾತ್ರಿ ಹಣ್ಣಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಜಯಂತ್ ಅವರು ಅಣ್ಣ ಸತೀಶ್ ಜತೆ ವಾಸವಾಗಿದ್ದರು. ಕೆಲಸದ ನಿಮಿತ್ತ ರಾತ್ರಿ 8 ಗಂಟೆ ಸುಮಾರಿಗೆ ಸತೀಶ್ ಮನೆಯಿಂದ ಹೊರ ಹೋಗಿದ್ದರು. ಆ ನಂತರ ಜಯಂತ್ ನೇಣು ಹಾಕಿಕೊಂಡಿದ್ದು, ಅಣ್ಣ ರಾತ್ರಿ 10.30ರ ಸುಮಾರಿಗೆ ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ವಿಜಯನಗರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.