ADVERTISEMENT

ಭಗತ್‌ಸಿಂಗ್‌ ಪುತ್ಥಳಿ 23ರಂದು ಅನಾವರಣ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 19:39 IST
Last Updated 20 ಮಾರ್ಚ್ 2018, 19:39 IST

ಬೆಂಗಳೂರು: ರಾಷ್ಟ್ರೀಯ ಚಾಲಕರ ಒಕ್ಕೂಟದ ವತಿಯಿಂದ ಕ್ರಾಂತಿಕಾರಿ ಭಗತ್‌ ಸಿಂಗ್‌ ಪುತ್ಥಳಿಯನ್ನು ಸ್ವಾತಂತ್ರ್ಯ ಉದ್ಯಾನದಲ್ಲಿ ಅನಾವರಣ ಮಾಡಲಾಗುತ್ತದೆ.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ, ‘18 ಅಡಿ ಎತ್ತರದ ಈ ಪುತ್ಥಳಿಯನ್ನು ಶಿಲ್ಪ ಕಲಾವಿದ ಜಾನ್‌ ದೇವರಾಜ್‌  ರೂಪಿಸಿದ್ದಾರೆ. ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಇದೇ 23ರಂದು ಬೆಳಿಗ್ಗೆ 11.30ಕ್ಕೆ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಸಂಸದ ಪಿ.ಸಿ.ಮೋಹನ್‌, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಮೇಯರ್‌ ಆರ್‌. ಸಂಪತ್‌ ರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT