ADVERTISEMENT

ಮಳೆಯಿಂದ ಆಗಿರುವ ಅನಾಹುತದ ಚಿತ್ರಾವಳಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2015, 20:33 IST
Last Updated 26 ಏಪ್ರಿಲ್ 2015, 20:33 IST

ನಗರದ ಕೆ.ಎಚ್‌. ರಸ್ತೆ ಹಿಂಭಾಗದ ಶ್ರೀನಿವಾಸ ಕಾಲೊನಿಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ರಾಜಕಾಲುವೆ ದುರಸ್ತಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳೀಯ ನಿವಾಸಿಗಳನ್ನು ಸಂಕಷ್ಟಕ್ಕೆ ದೂಡಿದೆ. ಮೂರು ತಿಂಗಳ ಹಿಂದೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿತ್ತು. ಮೂರು ತಿಂಗಳ ಬಳಿಕವೂ ಕಾಮಗಾರಿಯಲ್ಲಿ ಹೆಚ್ಚಿನ ಪ್ರಗತಿ ಆಗಿಲ್ಲ. ರಾಜಕಾಲುವೆಯಲ್ಲಿದ್ದ ಹೂಳನ್ನು ರಸ್ತೆ ಮೇಲೆಯೇ ಹಾಕಲಾಗಿದೆ.

ಇದರಿಂದಾಗಿ  ನಿವಾಸಿಗಳು ಮೂಗು ಮುಚ್ಚಿಕೊಂಡು ತಿರುಗಾಡಬೇಕಿದೆ. ಇನ್ನೊಂದೆಡೆ, ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸಂಕಷ್ಟವನ್ನು ದುಪ್ಪಟ್ಟುಗೊಳಿಸಿದೆ.  10 ನಿಮಿಷದ ಮಳೆಯಾದರೂ ಮನೆಗೆ ನೀರು ನುಗ್ಗುತ್ತಿದೆ.

‘ಕಾಮಗಾರಿಯ ವೇಗ ನೋಡಿದರೆ ಪೂರ್ಣಗೊಳ್ಳಲು ಇನ್ನೂ ಆರು ತಿಂಗಳು ಬೇಕು ಎನಿಸುತ್ತದೆ. ನಾಲ್ಕು ಮಳೆಗೆ ಬದುಕು ಸಾಕಾಗಿದೆ. ಮಳೆಗಾಲದ ಸ್ಥಿತಿ ಎಣಿಸುವಾಗ ಕಣ್ಣೀರು ಬರುತ್ತದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ನೊಂದು ನುಡಿಯುತ್ತಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.