ADVERTISEMENT

ಮುತ್ತೂಟ್‌ ಫೈನಾನ್ಸ್‌ನಲ್ಲಿ ದರೋಡೆ ಯತ್ನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2015, 20:24 IST
Last Updated 5 ಅಕ್ಟೋಬರ್ 2015, 20:24 IST

ಬೆಂಗಳೂರು:  ನಗರದ ಲಗ್ಗೆರೆ ಹೊರ ವರ್ತುಲ ರಸ್ತೆ ಸಮೀಪದ ಮುತ್ತೂಟ್‌ ಫೈನಾನ್ಸ್‌ನಲ್ಲಿ ದುಷ್ಕರ್ಮಿಗಳು ಪಿಸ್ತೂಲ್‌ನಿಂದ ಬೆದರಿಸಿ ದರೋಡೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಕಟ್ಟಡದ ಒಂದನೇ ಮಹಡಿಯಲ್ಲಿ ಮುತ್ತೂಟ್‌ ಫೈನಾನ್ಸ್‌  ಕಚೇರಿ ಇದೆ. ಅ.1ರ ಮಧ್ಯಾಹ್ನ 3.30ರ ಸುಮಾರಿಗೆ ಕಚೇರಿಗೆ ನುಗ್ಗಿರುವ ಮೂವರು ದುಷ್ಕರ್ಮಿಗಳು, ಮಳಿಗೆಯಲ್ಲಿದ್ದ ಇಬ್ಬರು ಸಿಬ್ಬಂದಿಗೆ ಪಿಸ್ತೂಲ್‌ನಿಂದ ಬೆದರಿಸಿ ಹಣ ಕೇಳಿದ್ದಾರೆ. ಆಗ ಕಚೇರಿಯಲ್ಲಿದ್ದ ಭಾಗ್ಯ ಎಂಬುವರು ಸೈರನ್‌ ಒತ್ತಿದ್ದಾರೆ. ಸೈರನ್‌ ಶಬ್ದ ಕೇಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಆರೋಪಿಗಳ ಪತ್ತೆಗೆ ಮಲ್ಲೇಶ್ವರ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಘಟನೆ ವೇಳೆ ಆರೋಪಿಗಳು ಹೆಲ್ಮೆಟ್ ಧರಿಸಿದ್ದರು. ಹೀಗಾಗಿ ಅವರ ಗುರುತು ಪತ್ತೆಯಾಗಿಲ್ಲ. ಆರೋಪಿಗಳು ಸ್ವಿಫ್ಟ್‌ ಕಾರಿನಲ್ಲಿ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.