ADVERTISEMENT

ಮೊಬೈಲ್‌ ಕಂಪೆನಿ ಉದ್ಯೋಗಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 20:42 IST
Last Updated 30 ಡಿಸೆಂಬರ್ 2017, 20:42 IST

ಬೆಂಗಳೂರು: ಶ್ರೀರಾಂಪುರ ಬಳಿಯ ದಯಾನಂದ ನಗರದಲ್ಲಿ ಭರತ್ ಕುಮಾರ್ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಬೈಲ್‌ ತಯಾರಿಸುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್‌, ಎರಡು ವರ್ಷಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಅವರಿಗೆ 1 ವರ್ಷದ ಮಗು ಇದೆ.

‘ದಂಪತಿ ನಡುವೆ ಜಗಳವಾಗುತ್ತಿತ್ತು. ಪತ್ನಿಯು ಇತ್ತೀಚೆಗೆ ತವರು ಮನೆಗೆ ಹೋಗಿದ್ದರು. ವಾರದ ಹಿಂದೆ ಮನೆಗೆ ಬಂದು ಮಗುವನ್ನು ಸಹ ಕರೆದೊಯ್ದಿದ್ದರು. ಮಗುವನ್ನು ನೋಡಲು ಭರತ್ ಅವರಿಗೆ ಅವಕಾಶ ನೀಡಿರಲಿಲ್ಲ. ಅದರಿಂದ ಅವರು ನೊಂದಿದ್ದರು’ ಎಂದು ಸಂಬಂಧಿಕರು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.