ಬೆಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ಕೆ.ಆರ್.ಪುರ ಕ್ಷೇತ್ರದ ದೇವಸಂದ್ರ ವಾರ್ಡ್ನಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಮುಖಂಡ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ವೆಂಕಟೇಶ್ವರ ಚಿತ್ರಮಂದಿರದ ರಸ್ತೆ, ನೇತ್ರಾವತಿ ಬಡಾವಣೆಗಳಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಿದರು.
‘ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಕಸವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡಬೇಕು’ ಎಂದು ನಂದೀಶ್ ರೆಡ್ಡಿ ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.