ADVERTISEMENT

ರೈತರಿಗೆ ಗೊಬ್ಬರ ಉಚಿತ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST
ರೈತರಿಗೆ ಗೊಬ್ಬರ ಉಚಿತ
ರೈತರಿಗೆ ಗೊಬ್ಬರ ಉಚಿತ   

ಬೆಂಗಳೂರು: ದಾಸನಪುರ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಥೆಯು ರೈತರಿಗೆ ಗೊಬ್ಬರ ಉಚಿತ ನೀಡುವ ಯೋಜನೆ ರೂಪಿಸಿದೆ.

‘ಆಲೂಗಡ್ಡೆ, ಈರುಳ್ಳಿಯ ಸಿಪ್ಪೆಯನ್ನು ಗೊಬ್ಬರವಾಗಿ ಪರಿವರ್ತಿಸುವ ಯಂತ್ರವನ್ನು ಜರ್ಮನಿಯಿಂದ ₹1.60 ಕೋಟಿಗೆ ಖರೀದಿಸಲಾಗಿದೆ. ಯಂತ್ರವನ್ನು ಎಪಿಎಂಸಿ ಯಾರ್ಡ್‌ ಆವರಣದಲ್ಲಿ ಅಳವಡಿಸಿದ್ದು, ಇನ್ನೆರಡು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ’ ಎಂದು ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ತಿಳಿಸಿದರು.

‘ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಥೆಯಲ್ಲಿರುವ ರೈತರಿಗೆ ಮೊದಲ ಆದ್ಯತೆ ನೀಡಲಾಗುವುದು. ಲಾಟರಿ ಮೂಲಕ ರೈತರ ಹೆಸರನ್ನು ಅಯ್ಕೆ ಮಾಡಲಾಗುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.