ADVERTISEMENT

‘ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ’

​ಪ್ರಜಾವಾಣಿ ವಾರ್ತೆ
Published 19 ಜನವರಿ 2017, 19:46 IST
Last Updated 19 ಜನವರಿ 2017, 19:46 IST
‘ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ’
‘ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ’   

ಬೆಂಗಳೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಮಸ್ಯೆ ಸ್ಪಂದಿಸದೆ ಮಲತಾಯಿ ಧೋರಣೆ ಅನುಸರಿಸುತ್ತಿವೆ. ಭವಿಷ್ಯದಲ್ಲಿ ರೈತರು, ಕಾರ್ಮಿಕರು, ನೊಂದವರು ನೆಮ್ಮದಿಯಿಂದ ಬದುಕಲು ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ನೀಡಬೇಕು’ ಎಂದು ಜೆಡಿಎಸ್‌ನ ಯಶವಂತಪುರ ಕ್ಷೇತ್ರ ಘಟಕದ ಅಧ್ಯಕ್ಷ ಟಿ.ಎನ್.ಜವರಾಯಿಗೌಡ ಅವರು ಮನವಿ ಮಾಡಿದರು.

ಬಿಇಎಲ್ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಪಂಚಲಿಂಗಯ್ಯ ಮಾತನಾಡಿ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.