ಬೆಂಗಳೂರು: ಹಳೇ ಮದ್ರಾಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಜ್ಯೋತಿ (30) ಎಂಬುವರು ಮೃತಪಟ್ಟಿದ್ದಾರೆ.
ವಿದ್ಯಾರಣ್ಯಪುರ ನಿವಾಸಿಯಾದ ಅವರು ಪತಿ ಸುರೇಶ್ ಜತೆ ಸ್ನೇಹಿತರ ಮನೆಯಿಂದ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಲಾರಿಯೊಂದು ದಂಪತಿಯ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದ ಜ್ಯೋತಿ ಅವರ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಚಾಲನೆ ಮಾಡುತ್ತಿದ್ದ ಸುರೇಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಜ್ಯೋತಿ ಅವರು ಸೀರೆ ವ್ಯಾಪಾರ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.