ಬೆಂಗಳೂರು: ‘ರಾಜ್ಯದಾದ್ಯಂತ ಇದೇ 22ರಂದು ನಡೆದ ಮಾಸಿಕ ಲೋಕ ಅದಾಲತ್ನಲ್ಲಿ ಒಟ್ಟು 17,913 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ.
‘ನ್ಯಾಯಾಲಯದಲ್ಲಿ ಬಾಕಿ ಇದ್ದ 15,449 ಹಾಗೂ 2,464 ವ್ಯಾಜ್ಯ ಪೂರ್ವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸಲಾಗಿದೆ. ಪ್ರಕರಣಗಳಲ್ಲಿ ರಾಜಿಯಾದ ಮೊತ್ತ ₹ 84,67,88,632ರಷ್ಟಿದೆ’ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಜಿ.ಉಮಾ ಪ್ರಕಟಣೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.