ಕಮ್ಮಗೊಂಡನಹಳ್ಳಿ: ಬಸ್ ಪಾಸ್ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ ಬಿಎಂಟಿಸಿ ನಿರ್ವಾಹಕಿ ವಿದ್ಯಾರ್ಥಿಯನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಕಮ್ಮಗೊಂಡನಹಳ್ಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಜಾಲಹಳ್ಳಿ– ಕೆಆರ್ ಪುರಂ ಮಾರ್ಗದ ಬಸ್ ನಲ್ಲಿ ಬಸ್ ಪಾಸ್ ವಿಚಾರವಾಗಿ ಎಂಎನ್ ಟಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ವಾಗ್ವಾದದಲ್ಲಿ ಸಹನೆ ಕಳೆದುಕೊಂಡ ನಿರ್ವಾಹಕಿ ಅರುಣಾ, ಪುನೀತ್ ಗೌಡ ಎಂಬ ವಿದ್ಯಾರ್ಥಿಯನ್ನು ಥಳಿಸಿ, ಕಚ್ಚಿ ಗಾಯಗೊಳಿಸಿದ್ದಾರೆ. ಜೊತೆಗೆ ಸಂಚಾರಿ ಪೋಲಿಸರೊಡನೆಯೂ ಮಾತಿನ ಚಕಮಕಿ ನಡೆಸಿ ವಿವಾದಕ್ಕೊಳಗಾಗಿದ್ದಾರೆ.
ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ನಿರ್ವಾಹಕಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.