ADVERTISEMENT

ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2015, 20:26 IST
Last Updated 29 ಮಾರ್ಚ್ 2015, 20:26 IST

ಬೆಂಗಳೂರು: ಸುಬ್ರಹ್ಮಣ್ಯನಗರ ಸಮೀಪದ ಕೇತಮಾರನಹಳ್ಳಿಯಲ್ಲಿ ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿ ಚೇತನ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೆಕ್ಯಾನಿಕ್‌ ಗೋವಿಂದರಾಜು ಅವರ ಮಗನಾದ ಚೇತನ್, ಸಂಜೆ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾನೆ. ದೇವಸ್ಥಾನಕ್ಕೆ ಹೋಗಿದ್ದ ಪೋಷಕರು, ರಾತ್ರಿ 9 ಗಂಟೆಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಾಗಿಲು ಮುರಿದು ಕೋಣೆ ಪ್ರವೇಶಿಸಿದ ಗೋವಿಂದರಾಜು, ಕೂಡಲೇ ಮಗನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆಗಾಗಲೇ ಚೇತನ್ ಕೊನೆಯುಸಿರೆಳೆದಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.