ADVERTISEMENT

ವಿಷ್ಣು ಸ್ಮಾರಕ:ವಿವಾದರಹಿತ ಜಮೀನಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 19:58 IST
Last Updated 30 ಜೂನ್ 2015, 19:58 IST

ಬೆಂಗಳೂರು: ‘ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ವಿವಾದರಹಿತ ಐದು ಎಕರೆ ಜಮೀನನ್ನು ಮಂಜೂರು ಮಾಡಬೇಕು’ ಎಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

‘ನನ್ನ ಕ್ಷೇತ್ರದ ಮೈಲಸಂದ್ರ ಗ್ರಾಮದ ಬಳಿ ಸ್ಮಾರಕ ನಿರ್ಮಾಣಕ್ಕೆ ಮಂಜೂರು ಮಾಡಿರುವ  ಎರಡು ಎಕರೆ ಜಾಗವನ್ನು  ನೀಡದಂತೆ  ಹೈಕೋರ್ಟ್‌ ಆದೇಶಿಸಿದೆ. ಇದರಿಂದಾಗಿ  ಲಕ್ಷಾಂತರ ವಿಷ್ಣು ಅಭಿಮಾನಿಗಳಿಗೆ ಬೇಸರವಾಗಿದೆ.  ಸರ್ಕಾರ ತಕ್ಷಣ ವಿಷ್ಣುವರ್ಧನ್‌ ಅವರ ಪತ್ನಿ ಭಾರತಿ ವಿಷ್ಣುವರ್ಧನ್‌ ಅವರೊಂದಿಗೆ ಚರ್ಚೆ ನಡೆಸಿ ಸ್ಮಾರಕ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.