ADVERTISEMENT

ವೈಭವದ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2017, 20:05 IST
Last Updated 9 ಏಪ್ರಿಲ್ 2017, 20:05 IST
ವೈಭವದ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
ವೈಭವದ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ   

ಮಾಗಡಿ: ತಿರುಮಲೆ  ತಿರುವೆಂಗಳನಾಥ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಿಗ್ಗೆ ಬ್ರಹ್ಮರಥೋತ್ಸವ ಭಕ್ತರ ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ವೈಭವದಿಂದ ನಡೆಯಿತು.

ರಥ ಬೀದಿಯ ಸುತ್ತಲಿನ ಅರವಟಿಗೆಗಳಿಗೆ ಅಲಂಕೃತ ರಂಗನಾಥಸ್ವಾಮಿ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯದೊಂದಿಗೆ ಹೊತ್ತುಕೊಂಡು ಹೋದ ಶ್ರೀಪಾದ ಕಾವಲುಗಾರರು ಪೂಜೆ ಸ್ವೀಕರಿಸಿ ರಥ ಮಂಟಪದಲ್ಲಿಟ್ಟರು. ಅಲಂಕೃತ ರಂಗನಾಥಸ್ವಾಮಿ ಶ್ರೀದೇವಿ ಭೂದೇವಿ ಸಹಿತ ಉತ್ಸವಮೂರ್ತಿಗಳನ್ನು  ವಿವಿಧ ಹೂವುಗಳಿಂದ ಅಲಂಕೃತವಾಗಿದ್ದ ರಥದ ಮೇಲಿಟ್ಟು ಪೂಜಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.