ADVERTISEMENT

ಶಶಿಕಲಾ ವಿಚಾರಣೆ ಐ.ಟಿ ಇಲಾಖೆ ಪತ್ರ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 20:09 IST
Last Updated 21 ನವೆಂಬರ್ 2017, 20:09 IST
ವಿ.ಕೆ. ಶಶಿಕಲಾ
ವಿ.ಕೆ. ಶಶಿಕಲಾ   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರನ್ನು ತಮಿಳುನಾಡಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೀಘ್ರವೇ ವಿಚಾರಣೆಗೆ ಒಳಪಡಿಸಲಿದ್ದಾರೆ.

ಶಶಿಕಲಾ ಹಾಗೂ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸೇರಿದ್ದ ಕಚೇರಿಗಳ ಮೇಲೆ ಇತ್ತೀಚೆಗೆ ದಾಳಿ ಮಾಡಿದ್ದ ಅಧಿಕಾರಿಗಳು, ₹ 1,430 ಕೋಟಿ ಮೌಲ್ಯದ ಅಘೋಷಿತ ಸಂಪತ್ತು ಪತ್ತೆ ಮಾಡಿದ್ದರು. ಈ ಸಂಬಂಧ ಶಶಿಕಲಾ ಅವರ ಹೇಳಿಕೆ ಪಡೆಯಲು ಮುಂದಾಗಿರುವ ಅಧಿಕಾರಿಗಳು, ಅವರ ವಿಚಾರಣೆಗೆ ಸಹಕಾರ ನೀಡುವಂತೆ ರಾಜ್ಯ ಕಾರಾಗೃಹಗಳ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

‘ನ. 22ರಿಂದ ನ.25ರವರಗಿನ ಅವಧಿಯಲ್ಲಿ ಅಧಿಕಾರಿಗಳು ಜೈಲಿಗೆ ಬರುವ ಸಾಧ್ಯತೆ ಇದೆ’ ಎಂದು ಕಾರಾಗೃಹಗಳ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.