ADVERTISEMENT

ಶೆಟ್ಟರ್‌ ಸುಳ್ಳುಗಾರ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2014, 20:14 IST
Last Updated 15 ಸೆಪ್ಟೆಂಬರ್ 2014, 20:14 IST

ಬೆಂಗಳೂರು: ‘ಬಿಜೆಪಿ ಒಂದು ಸುಳ್ಳಿನ ಪಕ್ಷ. ಜಗದೀಶ ಶೆಟ್ಟರ್‌ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಗೊತ್ತೇ ಇಲ್ಲ. ಅವರು ದಿನಕ್ಕೊಂದು ಸುಳ್ಳು ಹೇಳುತ್ತಾರೆ. ಅದಕ್ಕೆಲ್ಲ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿದ ಅವರು, ತಮ್ಮ ವಿರುದ್ಧ ಶೆಟ್ಟರ್‌ ನೀಡಿದ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿ­ಸಿದರು. ‘ಬಿಜೆಪಿಯವರು ಅಧಿಕಾರದ­ಲ್ಲಿದ್ದಾಗ ಮಾಡಿದ ತಪ್ಪುಗಳನ್ನು ನಾವೀಗ ಸರಿಪಡಿಸುತ್ತಿದ್ದೇವೆ. ಡಿನೋ­ಟಿಫೈ ಹಗರಣಗಳೆಲ್ಲ ಅವರದೇ ಕೊಡುಗೆ’ ಎಂದು ತಿಳಿಸಿದರು.

‘ನಿಗಮ– ಮಂಡಳಿಗಳಿಗೆ ನೇಮಕ ಮಾಡಲು ಪ್ರಾಥಮಿಕ ಸುತ್ತಿನ ಮಾತುಕತೆಯಷ್ಟೇ ಈಗ ನಡೆದಿದೆ. ವಿಸ್ತೃತವಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.