ಬೆಂಗಳೂರು: ಮಾನವ ಉತ್ಥಾನ ಸೇವಾ ಸಮಿತಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಜನವರಿ 31ರಿಂದ ಎರಡು ದಿನ ಸದ್ಭಾವನಾ ಸಮ್ಮೇಳನ ಹಮ್ಮಿಕೊಂಡಿದೆ. ನಿತ್ಯ ಸಂಜೆ 4 ರಿಂದ 8 ಗಂಟೆಯವರೆಗೆ ನಡೆಯುವ ಈ ಸಮ್ಮೇಳನದಲ್ಲಿ ಸದ್ಗುರುದೇವ ಸತ್ಪಾಲ್ ಜೀ ಮಹಾರಾಜ ಅವರು ಪ್ರವಚನ ನೀಡಲಿದ್ದಾರೆ.
ಸಮ್ಮೇಳನದಲ್ಲಿ ಮಾತಾ ಅಮೃತಾಜೀ, ವಿಭೂಜೀ ಮಹಾರಾಜ್ ಸೇರಿದಂತೆ ಅನೇಕ ಸಂತರು ಪಾಲ್ಗೊಳ್ಳಲಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಮಿತಿಯ ಕಾರ್ಯದರ್ಶಿ ಡಾ.ವಿಜಯಕುಮಾರ್ ರೈ (9480514588) ಅವರನ್ನು ಸಂಪರ್ಕಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.