ADVERTISEMENT

ಸಿ.ಎಂ ವಿರುದ್ಧ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2017, 19:34 IST
Last Updated 24 ಜುಲೈ 2017, 19:34 IST

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಅಪಮಾನಕರ  ಪದ ಬಳಸಿ ತೇಜೋವಧೆ ಮಾಡಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ನಗರ ಜಿಲ್ಲಾ ಘಟಕದ ವಕ್ತಾರ ಎನ್‌.ಆರ್.ರಮೇಶ್‌ ಅವರು 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಸೋಮವಾರ  ಮಾನನಷ್ಟ ಆರೋಪದಡಿ ಖಾಸಗಿ ದೂರು ದಾಖಲಿಸಿದ್ದಾರೆ.

‘ಜುಲೈ 22ರಂದು ಮಾಗಡಿ ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ಭಾಷಣದ ವೇಳೆ ನನ್ನ ಘನತೆಗೆ ಧಕ್ಕೆ ತರುವ ಪದಗಳನ್ನು ಬಳಸಿದ್ದಾರೆ. ಆ ಬಗ್ಗೆ  ಮಾಧ್ಯಮಗಳಲ್ಲಿ ಬಂದ ವರದಿ  ಆಧರಿಸಿ  ಮೊಕದ್ದಮೆ ಹೂಡುತ್ತಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT