ಬೆಂಗಳೂರು: ಬಹಿರಂಗ ಪ್ರಚಾರ ಅಂತ್ಯವಾದ ನಂತರವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಂಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು, ಕ್ಷೇತ್ರ ಬಿಟ್ಟು ತೆರಳಬೇಕು ಎಂದು ಅಭ್ಯರ್ಥಿಗಳ ಕೈಪಿಡಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟಾದರೂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಂಗಿರುವುದು ಸರಿಯಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಿಜೆಪಿ ಕಾನೂನು ಘಟಕದ ಸಂಚಾಲಕ ಎಂ.ವಿನೋದ್ಕುಮಾರ್ ಅವರು ಈ ಬಗ್ಗೆ ಮುಖ್ಯಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.