ADVERTISEMENT

ಸ್ವಚ್ಛ ತೆಗಾಗಿ ಕಾಲ್ನಡಿಗೆ ಜಾಥಾ

​ಪ್ರಜಾವಾಣಿ ವಾರ್ತೆ
Published 19 ಜನವರಿ 2017, 19:34 IST
Last Updated 19 ಜನವರಿ 2017, 19:34 IST

ಬೆಂಗಳೂರು: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ನಗರದ ಸ್ವಚ್ಛತೆ ಕಾಪಾಡುವ ಕುರಿತು ಜಾಗೃತಿ ಮೂಡಿಸಲು ಜೈನ್ ಶ್ವೇತಾಂಬರ ತೇರಾಪಂಥ್ ಮಹಿಳಾ ಮಂಡಳಿಯು ಜನವರಿ 21 ರಂದು (ಬೆಳಿಗ್ಗೆ 6.30ಕ್ಕೆ) ಕಬ್ಬನ್ ಉದ್ಯಾನದ ಆವರಣದಲ್ಲಿ  ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮೇಯರ್ ಜಿ.ಪದ್ಮಾವತಿ ಭಾಗವಹಿಸಲಿದ್ದಾರೆ ಎಂದು ಮಂಡಳಿಯ ಅಧ್ಯಕ್ಷೆ ನಿರ್ಮಲಾ ಸೋಲಂಕಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. 

‘ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪರಿಸರ ಸಂರಕ್ಷಣೆ, ಆರೋಗ್ಯ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಗುತ್ತದೆ.  ಸ್ವಚ್ಚತೆ ಕುರಿತು ನಗರದಲ್ಲಿ  ಸೂಚನಾ ಫಲಕಗಳನ್ನು ಅಳವಡಿಸ ಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.