ADVERTISEMENT

ಹೊರಗುತ್ತಿಗೆ ಪ್ರಸ್ತಾಪ ಕೈಬಿಟ್ಟ ಬಿಎಂಟಿಸಿ

ಸುದ್ದಿ 2 ನಿಮಿಷ

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 20:00 IST
Last Updated 30 ಜೂನ್ 2015, 20:00 IST

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊರಗುತ್ತಿಗೆ ಆಧಾರದಲ್ಲಿ ಬಸ್‌ಗಳನ್ನು ಕಾರ್ಯಾಚರಣೆ ಮಾಡುವ ಪ್ರಸ್ತಾಪವನ್ನು ಕೈಬಿಟ್ಟಿದೆ.

ಬಿಎಂಟಿಸಿಯು ನಷ್ಟ ಪ್ರಮಾಣ ಹೆಚ್ಚಿದ ಕಾರಣ ಹೊರಗುತ್ತಿಗೆ ಸೇವೆ ಆರಂಭಿಸಲು ಆಸಕ್ತಿ ವಹಿಸಿತ್ತು. ಇದಕ್ಕೆ ಸಂಸ್ಥೆಯ ನೌಕರರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈಗ ಅಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಬಿಎಂಟಿಸಿ ಮಂಗಳವಾರ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.