ADVERTISEMENT

₹ 1.13 ಕೋಟಿ ಸಾಲ ವಿತರಣೆ

ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘದ ಸಭೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2016, 19:52 IST
Last Updated 25 ಸೆಪ್ಟೆಂಬರ್ 2016, 19:52 IST
ನೆಲಮಂಗಲ ತಾಲ್ಲೂಕು ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್ ಉದ್ಘಾಟಿಸಿದರು. ಚಿತ್ರದಲ್ಲಿ ಸಂಘದ ಅಧ್ಯಕ್ಷ ಬಿ.ಮಲ್ಲೇಶಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ವಾಸುದೇವಮೂರ್ತಿ, ಶಿಕ್ಷಣ ಸಮನ್ವಯಾಧಿಕಾರಿ ನರಸಿಂಹಯ್ಯ, ಕೊಟ್ರೇಶ್  ಇದ್ದಾರೆ
ನೆಲಮಂಗಲ ತಾಲ್ಲೂಕು ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್ ಉದ್ಘಾಟಿಸಿದರು. ಚಿತ್ರದಲ್ಲಿ ಸಂಘದ ಅಧ್ಯಕ್ಷ ಬಿ.ಮಲ್ಲೇಶಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ವಾಸುದೇವಮೂರ್ತಿ, ಶಿಕ್ಷಣ ಸಮನ್ವಯಾಧಿಕಾರಿ ನರಸಿಂಹಯ್ಯ, ಕೊಟ್ರೇಶ್ ಇದ್ದಾರೆ   

ನೆಲಮಂಗಲ: ‘ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ  ₹ 1.13 ಕೋಟಿ ಸಾಲ ನೀಡಿದ್ದು, ₹ 15 ಲಕ್ಷ ಲಾಭ ಗಳಿಸಿದೆ’ ಎಂದು ಸಂಘದ ಅಧ್ಯಕ್ಷ ಅಧ್ಯಕ್ಷ ಬಿ.ಮಲ್ಲೇಶಯ್ಯ ತಿಳಿಸಿದರು.

ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಸುಮಾರು 950 ಶಿಕ್ಷಕರಿದ್ದು, 750 ಮಂದಿ ಸಂಘದ ಸದಸ್ಯತ್ವ ಪಡೆದಿದ್ದಾರೆ. ಸಂಘವು ₹40 ಲಕ್ಷ  ಪಾಲು ಬಂಡವಾಳ ಹೊಂದಿದೆ ’ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್ ಸಭೆಯನ್ನು  ಉದ್ಘಾಟಿಸಿದರು.  ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ವಾಸುದೇವಮೂರ್ತಿ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತ ಸದಸ್ಯರನ್ನು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.