ಬೆಂಗಳೂರು: ಆಡುಗೋಡಿಯ ವಿದ್ಯಾಗಣಪತಿ ದೇವಸ್ಥಾನದ ಸಂಸ್ಥಾಪಕ ಟಿ.ಎಂ.ವೆಂಕಟಸ್ವಾಮಿ (67) ಹೃದಯಾಘಾತದಿಂದ ಮಂಗಳವಾರ ಸಂಜೆ ನಿಧನರಾದರು.
ಅವರಿಗೆ ಪತ್ನಿ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಸಿನಿಮಾ ನಿರ್ಮಾಪಕರೂ ಆಗಿದ್ದ ಅವರು, ‘ಇಬ್ಬರ ನಡುವೆ ಮುದ್ದಿನ ಆಟ’ ಎಂಬ ಸಿನಿಮಾ ನಿರ್ಮಿಸಿದ್ದರು.
ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಮೀಸಗಾನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದರು. ಕುಟುಂಬಸ್ಥರ ಸಂಪರ್ಕಕ್ಕೆ: 89713 90533
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.