ADVERTISEMENT

ಬಜೆಟ್‌ವರೆಗೆ ಕಾವೇರಿಗೆ ಸಾರ್ವಜನಿಕರ ಭೇಟಿ ನಿಷೇಧ

​ಪ್ರಜಾವಾಣಿ ವಾರ್ತೆ
Published 21 ಜನವರಿ 2018, 20:06 IST
Last Updated 21 ಜನವರಿ 2018, 20:06 IST

ಬೆಂಗಳೂರು: 2018–19 ನೇ ಸಾಲಿನ ರಾಜ್ಯ ಬಜೆಟ್‌ (ಫೆ.16) ಮಂಡನೆಯವರೆಗೂ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಗೆ ಸಾರ್ವಜನಿಕರ ಭೇಟಿ ನಿಷೇಧಿಸಲಾಗಿದೆ.

ಈ ಕುರಿತು ನಿವಾಸದ ಮುಂಭಾಗದಲ್ಲಿ ಫಲಕ ಹಾಕಲಾಗಿದೆ. ಭಾನುವಾರ (ಜ. 21) ಬೆಳಿಗ್ಗೆ ಮುಖ್ಯಮಂತ್ರಿಗೆ ಅಹವಾಲು ಸಲ್ಲಿಸಲು ಅವರ ಮನೆಗೆ ಬಂದಿದ್ದ ಜನರು, ನಿರಾಶರಾಗಿ ಮರಳಿದರು.

‘ಬಜೆಟ್‌ ಮಂಡನೆ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ ನಿಗದಿಯಾಗಿದೆ. ಸಮಯದ ಕೊರತೆಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.