ADVERTISEMENT

ರೇವಣ್ಣಗೆ ಸಚಿವ ಸ್ಥಾನ: ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2017, 6:27 IST
Last Updated 2 ಸೆಪ್ಟೆಂಬರ್ 2017, 6:27 IST

ಬೀದರ್‌: ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ದೊರೆತಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೇವಣ್ಣ ಅವರ ಅಭಿಮಾನಿಗಳು ನಗರದಲ್ಲಿ ಶುಕ್ರವಾರ ವಿಜಯೋತ್ಸವ ಆಚರಿಸಿದರು.

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಮಲ್ಲಿಕಾರ್ಜುನ ಬಿರಾದಾರ ನೇತೃತ್ವದಲ್ಲಿ ಬೋಮಗೊಂಡೇಶ್ವರ ಹಾಗೂ ಅಂಬೇಡ್ಕರ್ ವೃತ್ತದ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

‘ರೇವಣ್ಣ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದ್ದಾರೆ. ರೇವಣ್ಣ ದೂರದೃಷ್ಟಿಯ ನಾಯಕರಾಗಿದ್ದಾರೆ’ ಎಂದು ಮಲ್ಲಿಕಾರ್ಜುನ ಬಿರಾದಾರ ಹೇಳಿದರು. ಮುಖಂಡರಾದ ಮಾಳಪ್ಪ ಅಡಸಾರೆ, ಎಂ.ಎಸ್. ಕಟಗಿ, ಸಂತೋಷ ಜೋಳದಾಪಕಾ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.