ಔರಾದ್: ತಾಲ್ಲೂಕಿನ ಸಂತಪುರ ಹೋಬಳಿ ಕೇಂದ್ರದಲ್ಲಿ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಹಾಳಾಗಿ ಸಾರ್ವಜನಿಕರಿಗೆ ತೊಂದರೆ ಎದುರಿಸುವಂತಾಗಿದೆ. ಕಳೆದ ಐದಾರು ತಿಂಗಳ ಹಿಂದೆ ರಸ್ತೆ ವಿಸ್ತರಿಸುವ ನೆಪದಲ್ಲಿ ಅಂಗಡಿಗಳು ತೆರವು ಮಾಡಲಾಗಿದೆ. ಆದರೆ ಇಂದಿಗೂ ರಸ್ತೆ ಅಕ್ಕ ಪಕ್ಕ ಬಿದ್ದಿರುವ ಕಲ್ಲು ಮಣ್ಣು ತೆರವು ಮಾಡಿಲ್ಲ.
ಬಸವೇಶ್ವರ ವೃತದಿಂದ ಜಮಗಿ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ರಸ್ತೆ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದೆ. ಮತ್ತೊಂದೆಡೆ ದೂಳು ವ್ಯಾಪಕವಾಗಿ ಹರಡಿ ಜನರ ಆರೋಗ್ಯದ ಮೇಲೆ ಪರಿಣಾಮವಾಗುತ್ತಿದೆ.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಕಾಳಜಿ ವಹಿಸಿ ಕೂಡಲೇ ರಸ್ತೆ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಸಿದ್ದಯ್ಯ ಸ್ವಾಮಿ, ಸಂತಪುರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.