ADVERTISEMENT

ಗುಂಡಾಲ್‌ ಜಲಾಶಯದಿಂದ ನೀರು ಬಿಡಲು ಮನವಿ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 8:22 IST
Last Updated 22 ಡಿಸೆಂಬರ್ 2017, 8:22 IST

ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯದಿಂದ ಮಧುವನಹಳ್ಳಿ ಗ್ರಾಮದ ಕೆರೆಕಟ್ಟೆಗಳಿಗೆ ಹಾಗೂ ಸುತ್ತಲ ಜಮೀನುಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಧುವನಹಳ್ಳಿ ಗ್ರಾಮದ ರೈತರು ಶಾಸಕ ಆರ್. ನರೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ನರೇಂದ್ರ ಮಾತನಾಡಿ, ಜನವರಿ ಅಂತ್ಯದಲ್ಲಿ ಎಂಜಿನಿಯರ್‌ಗಳ ಜೊತೆ ಚರ್ಚಿಸಿ ಫೆಬ್ರುವರಿ ಮೊದಲ ವಾರದಲ್ಲಿ ನೀರು ಬಿಡಲಾಗುವುದು ಎಂದು ಭರವಸೆ ನೀಡಿದರು. ಜಿ.ಪಂ. ಮಾಜಿ ಸದಸ್ಯ ಶಿವಕುಮಾರ್ ಮಾತನಾಡಿ, ಮಧುವನಹಳ್ಳಿ ಗ್ರಾಮದಲ್ಲಿ ಹಿಂಗಾರು ಹಾಗೂ ಮುಂಗಾರು ಬೆಳೆಯ ಸಮಯದಲ್ಲಿ ನಿರೀಕ್ಷಿತ ಮಳೆ ಇಲ್ಲದೆ ರೈತರು ಫಸಲು ಬೆಳೆಯಲು ಸಾಧ್ಯವಾಗಲಿಲ್ಲ. ಈ ವರ್ಷ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿದ್ದು, ಬೆಳೆ ಬೆಳೆಯಲು ಗುಂಡಾಲ್ ಜಲಾಶಯದಿಂದ ನೀರು ಬಿಡುವಂತೆ ಮನವಿ ಮಾಡಿದರು.

ಮಧುವನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಹದೇವ ಸ್ವಾಮಿ, ಮುಖಂಡರಾದ ಮಹದೇವಶೆಟ್ಟಿ, ಮಹೇಶ್, ಸಿದ್ದೇಶ್, ಮಹದೇವಸ್ವಾಮಿ, ರವೀಂದ್ರನಾಥ್, ನಂದೀಶ್, ಗುರುನಂಜಶೆಟ್ಟಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.