ADVERTISEMENT

ನದಿಗಳನ್ನು ರಕ್ಷಿಸಿ: ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2017, 6:59 IST
Last Updated 16 ಸೆಪ್ಟೆಂಬರ್ 2017, 6:59 IST
ನದಿಗಳನ್ನು ರಕ್ಷಿಸಿ ಜಾಗೃತಿ ಅಭಿಯಾನ ಬೆಂಬಲಿಸಿ ಶುಕ್ರವಾರ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ಯುವ ಘಟಕ ಹಾಗೂ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು
ನದಿಗಳನ್ನು ರಕ್ಷಿಸಿ ಜಾಗೃತಿ ಅಭಿಯಾನ ಬೆಂಬಲಿಸಿ ಶುಕ್ರವಾರ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ಯುವ ಘಟಕ ಹಾಗೂ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು   

ಗುಂಡ್ಲುಪೇಟೆ: ನದಿಗಳನ್ನು ಉಳಿಸುವ ಸಲುವಾಗಿ ಈಶಾ ಫೌಂಡೇಶನ್‌ನಿಂದ ನಡೆಸುತ್ತಿರುವ ಅಭಿಯಾನಕ್ಕೆ ಬೆಂಬಲ ಸೂಚಿಸಿ ಶುಕ್ರವಾರ ಪಟ್ಟಣದಲ್ಲಿ ಬಿಜೆಪಿ ಯುವ ಘಟಕದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

ಪಟ್ಟಣದ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿಗಳ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ನದಿಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ ಎಂದು ಅರಿವು ಮೂಡಿಸಿದರು.
ಜಾಥಾದಲ್ಲಿ ಬಿಜೆಪಿ ಯುವ ಮೊರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ಯೋಗಗುರು ನಾಗೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT