ADVERTISEMENT

ಬಂಡೀಪುರ ವ್ಯಾಪ್ತಿಯಲ್ಲಿ ನಿಷೇಧ ತೆರವಿಗೆ ಹೈಕೋರ್ಟ್‌ಗೆ ಮನವಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2015, 11:41 IST
Last Updated 4 ಮಾರ್ಚ್ 2015, 11:41 IST

ಗುಂಡ್ಲುಪೇಟೆ:  ತಾಲ್ಲೂಕಿನ ಪ್ರಸಿದ್ಧ ಬಂಡೀಪುರ ರಾಷ್ಟೀಯ ಉದ್ಯಾನವನದ ವ್ಯಾಪ್ತಿಯಲ್ಲಿನ ಹೆದ್ದಾರಿ 212  ಹಾಗೂ 67ರಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆರವುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಸಲ್ಲಿಸಬೇಕೆಂದು ನಿರ್ಧರಿಸಲಾಗಿದೆ.

ಪಟ್ಟಣದ ಖಾಸಗಿ ರೆಸಾರ್ಟ್‌ನಲ್ಲಿ ಈಚೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಬಗ್ಗೆ ನಡೆದ ಗಡಿ ರಾಜ್ಯ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಪ್ರಮುಖರು ಗಡಿ ಭಾಗದ ಅರಣ್ಯ ಪ್ರದೇಶ ವ್ಯಾಪ್ತಿಯೊಳಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅರಣ್ಯ ಇಲಾಖೆ ನ್ಯಾಯಾಲಯದ ಮೂಲಕ ನಿರ್ಭಂದ ಹೇರಲಾಗಿರುವ ಅದೇಶವನ್ನು ತೆರವುಗೊಳಿಸುವ ಕುರಿತಂತೆ ಹೈಕೋರ್ಟ್‌ ಗೆ ವರದಿ ಸಲ್ಲಿಸಲು ಕೇರಳ, ತಮಿಳುನಾಡು, ಕರ್ನಾಟಕ ರಾಜ್ಯದ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಒಕ್ಕೊರಲ ತೀರ್ಮಾನ ಕೈಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.