ADVERTISEMENT

ಭರಚುಕ್ಕಿಗೆ ನೀರಿನ ಬರ...

​ಪ್ರಜಾವಾಣಿ ವಾರ್ತೆ
Published 18 ಜುಲೈ 2014, 10:08 IST
Last Updated 18 ಜುಲೈ 2014, 10:08 IST
ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿಯ ಭರಚುಕ್ಕಿ ನೀರಿಲ್ಲದೆ ಭಣಗುಡುತ್ತಿದೆ
ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿಯ ಭರಚುಕ್ಕಿ ನೀರಿಲ್ಲದೆ ಭಣಗುಡುತ್ತಿದೆ   

ಕೊಳ್ಳೇಗಾಲ: ಜುಲೈ ಮೊದಲ ವಾರದಲ್ಲೇ ಭೋರ್ಗರೆದು ಧುಮ್ಮಿಕ್ಕುತ್ತಿದ್ದ ಭರಚುಕ್ಕಿ ಮತ್ತು ಗಗನಚುಕ್ಕಿ ಜಲಪಾತಗಳು ನೀರಿಲ್ಲದೆ ಭಣಗುಡುತ್ತಿವೆ.

ಕಾವೇರಿ ಕೊಳ್ಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಆದರೆ, ಕಾವೇರಿ ಮತ್ತು ಕಬಿನಿ ಜಲಾಶಯಗಳು ಇನ್ನೂ ಭರ್ತಿಯಾಗದ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯದ ಕಾರಣ ಸಾವಿರಾರು ಪ್ರವಾಸಿಗರ ಆಕರ್ಷಣೆಯ ತಾಣವಾದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ನೀರಿಲ್ಲದೆ ಒಣಗಿವೆ.

ಇದು ಪ್ರವಾಸಿಗರಲ್ಲಿ ನಿರಾಸೆ ಮೂಡಿಸಿದೆ. ಜಲಪಾತದಲ್ಲಿ ನೀರು ಧುಮ್ಮಿಕ್ಕುವ ದಿನಗಳಿಗೆ ಕಾಯುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.