ADVERTISEMENT

ಮಧ್ಯರಂಗನಾಥ ದೇವಾಲಯಕ್ಕೆ ದೇವೇಗೌಡ ಭೇಟಿ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 7:19 IST
Last Updated 30 ಡಿಸೆಂಬರ್ 2017, 7:19 IST

ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಗ್ರಾಮದ ಶಿವನಸಮುದ್ರದ ಮಧ್ಯರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು, ‘ವೈಕುಂಠ ಏಕಾದಶಿ ಪ್ರಯುಕ್ತ ಆದಿರಂಗ, ಮಧ್ಯರಂಗ ಹಾಗೂ ಅಂತ್ಯರಂಗ ದೇವಸ್ಥಾನಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದ ಜನರಿಗೆ ಹಾಗೂ ರೈತರಿಗೆ ಸುಭಿಕ್ಷೆಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದೇನೆ’ ಎಂದರು.

ಈ ವೇಳೆ ದೇವೇಗೌಡ ಅವರ ಪತ್ನಿ ಚೆನ್ನಮ್ಮ, ಪುತ್ರ ಎಚ್.ಡಿ. ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕ ಅನ್ನದಾನಿ, ಮುಖಂಡರಾದ ಲೋಕೇಶ್ ಮೌರ್ಯ, ಚಾಮರಾಜು, ಕಾಮರಾಜು, ನಾಗಸುಂದರ, ಸಂದೀಪ್‌ಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.